TSK

TSK · ವಿಮೋಚನಕಾಂಡ 22:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು.

¶ “‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.

¶ “‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.

¶ “ಅವರು, ಪಶುಸಂಗಮ ಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಆಗ ಆಕೆಯು ಅವನಿಗೆ, “ಸೌಲನು ಮಾಡಿದ್ದು ನಿನಗೆ ಗೊತ್ತುಂಟು. ಅವನು ಸತ್ತವರಲ್ಲಿ ವಿಚಾರಿಸುವವರನ್ನು ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನಲ್ಲಾ, ಹೀಗಿದ್ದರೂ ನಾನೂ ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರುಲೊಡ್ಡುವುದೇಕೆ?” ಅಂದಳು.

¶ ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.

ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಮಾಟಮಂತ್ರಗಳ ಪುಸ್ತಕಗಳನ್ನು ತಂದು, ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಮೌಲ್ಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಆಯಿತೆಂದು ತಿಳಿದುಕೊಂಡರು.

‹ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ›‹ಹೊರಗಿರುವರು”› ಎಂದು ಹೇಳಿದನು.