TSK

TSK · ವಿಮೋಚನಕಾಂಡ 23:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ಕದಿಯಬಾರದು, “‘ಮೋಸಮಾಡಬಾರದು, “‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.

ಅರಸನು ತಿರುಗಿ ಅವನನ್ನು, “ನಿನ್ನ ಯಜಮಾನನ ಮಗನು ಎಲ್ಲಿದ್ದಾನೆ?” ಎಂದು ಕೇಳಲು ಅವನು, “ತನ್ನ ತಂದೆಯ ರಾಜ್ಯವನ್ನು ಇಸ್ರಾಯೇಲರು ಮರಳಿ ತನಗೇ ಕೊಡುವರೆಂದು ಹೇಳಿ ಅವನು ಯೆರೂಸಲೇಮಿನಲ್ಲೇ ಉಳಿದನು” ಅಂದನು

ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.

ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.

ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.

ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು ಇವುಗಳೇ.

ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು, ಸುಳ್ಳುಸಾಕ್ಷಿಯು ಅಸತ್ಯವನ್ನು ನುಡಿಯುವನು.

ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.

ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು, ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವುದು.

ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ, ಮಾತಿನಿಂದ ಮೋಸಮಾಡಬೇಡ.

ಅದಕ್ಕೆ ಅವನು, “ಅವು ಯಾವುವು?” ಎಂದು ಕೇಳಲು ಯೇಸು, ‹“ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು.›

ಈ ಸುದ್ದಿಯು ದೇಶಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ” ಎಂದರು.

ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.

“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.

ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ,

¶ ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.