TSK

TSK · ವಿಮೋಚನಕಾಂಡ 23:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.

ಆರು ದಿನಗಳು ಕೆಲಸ ಮಾಡಬೇಕು. ಏಳನೆಯ ದಿನ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ. ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು.

ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು” ಹೇಳಿದನು.

ಇದಲ್ಲದೆ ದೇಶದಲ್ಲಿ ವಾಸಿಸುತ್ತಿದ್ದ ತೂರ್ಯರು ಮೀನು ಮುಂತಾದ ಸರಕುಗಳನ್ನು ತಂದು ಯೆಹೂದ್ಯರಿಗೆ ಸಬ್ಬತ್ ದಿನದಲ್ಲಿ ಯೆರೂಸಲೇಮಿನಲ್ಲೇ ಮಾರುತ್ತಿದ್ದರು.

ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.