ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ.
TSK
TSK · ವಿಮೋಚನಕಾಂಡ 23:21
Treasury of Scripture Knowledge references in ಕನ್ನಡ IRV.
ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು.
ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು’” ಎಂದು ಹೇಳಿದನು.
ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.
ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.
ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು.
ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.
ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.
ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.
ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.
ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.
“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”
‹ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.›
‹ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು”› ಎಂದನು.
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, ‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ.
¶ ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.
ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.
¶ ‹“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು,›‹ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ›‹ಹೇಳುವುದೇನಂದರೆ,›
¶ ‹“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ,›‹ಪರಿಶುದ್ಧನೂ,›‹ಸತ್ಯವಂತನೂ,›‹ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ,›‹ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,›