ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,
TSK
TSK · ವಿಮೋಚನಕಾಂಡ 23:32
Treasury of Scripture Knowledge references in ಕನ್ನಡ IRV.
¶ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.
¶ ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.
ಯೆಹೋವನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.
ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.
¶ ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.
ಬೆಳಕಿಗೂ, ಕತ್ತಲೆಗೂ ಅನ್ಯೋನ್ಯತೆಯೇನು? ಕ್ರಿಸ್ತನಿಗೂ ಸೈತಾನನಿಗೂ ಒಪ್ಪಂದವೇನು? ವಿಶ್ವಾಸಿಗೂ ಅವಿಶ್ವಾಸಿಗೂ ಪಾಲುಗಾರಿಕೆಯೇನು?