TSK

TSK · ವಿಮೋಚನಕಾಂಡ 23:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.

¶ “ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ” ಎಂದು ಎಚ್ಚರಿಸಿದನು.

ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು, ಅನಾಥನ ಮೇಲೆ ಕೈಮಾಡಿದೆನೋ?

¶ ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.

ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.

ಕೊಬ್ಬಿ ಢಾಂಭಿಕರಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು.

ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ,

ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.

¶ ಅಯ್ಯೋ, ಅವಿಧೇಯತೆ ಮಲಿನವೂ ಆದ ದಬ್ಬಾಳಿಕೆ ನಡೆಸುವ ನಗರದ ಗತಿಯನ್ನು ಏನು ಹೇಳಲಿ!

¶ ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?