TSK

TSK · ವಿಮೋಚನಕಾಂಡ 27:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.

ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.

ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.

¶ ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.

ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು.

¶ ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು.

ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿರಂತರವಾದ ಧೂಪ ಸಮರ್ಪಣೆಯು ನಡೆಯುತ್ತಿರಬೇಕು.

ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದೆಂದು ನೀವು ಭಾವಿಸಬೇಕು.

ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.

ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಅದರ ಮೇಲಿರುವ ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.

“ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.

ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’

ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.

ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು.

ಲೇವಿಯರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅದರ ಸಂಬಂಧವಾಗಿ ಅವರು ಮಾಡುವ ಪಾಪಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು. ಆದರೆ ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಸ್ವತ್ತು ಇರುವುದಿಲ್ಲ.

¶ “‘ನೀವೂ, ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ವಾಸಸ್ಥಳಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.

ದಾವೀದನು ಇಸ್ರಾಯೇಲರಲ್ಲಿ ಇದನ್ನು ಕಟ್ಟಳೆಯಾಗಿ ನೇಮಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ.

ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.

ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.

‹ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.›

ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.