TSK

TSK · ವಿಮೋಚನಕಾಂಡ 28:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.

ಆ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳು ಇರಬೇಕು. ಅದರ ಎರಡು ತುದಿಗಳು ಜೋಡಿಸಲ್ಪಟ್ಟಿರಬೇಕು.

¶ ಮುದ್ರಾಕ್ಷವನ್ನು ಕೆತ್ತುವ ರೀತಿಯಲ್ಲಿ ಗೋಮೇಧಕರತ್ನಗಳಲ್ಲಿ ಇಸ್ರಾಯೇಲನ ಹನ್ನೆರಡು ಮಕ್ಕಳ ಹೆಸರುಗಳನ್ನು ಕೆತ್ತಿ ಆ ರತ್ನಗಳನ್ನು ಕುಂದಣದಲ್ಲಿ ಹಚ್ಚಿದರು.

ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.

ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು.

ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.

ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”

ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ಹೊಂದಿಕೊಂಡು ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಮತ್ತು ಯಾಜಕರು ತನ್ನ ಸಿಂಹಾಸನದಲ್ಲಿ ಕುಳಿತಿರುವರು. ಅವರಿಬ್ಬರೂ ಸಮ್ಮತಿ ಸಮಾಧಾನದಿಂದ ಇರುವರು.

ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.

ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.