ಮುದ್ರೆಗಳನ್ನು ಕೆತ್ತುವ ಹಾಗೆ ಆ ಶಿಲ್ಪಿಗರಿಂದ ಎರಡೂ ರತ್ನಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ, ಅದಕ್ಕೆ ಚಿನ್ನವನ್ನು ಆ ಮುದ್ರೆಗಳ ಮೇಲೆ ಇರಿಸಬೇಕು.
TSK
TSK · ವಿಮೋಚನಕಾಂಡ 28:17
Treasury of Scripture Knowledge references in ಕನ್ನಡ IRV.
ಜ್ಞಾನವಿರುವಲ್ಲಿ ಹವಳವೂ, ಸ್ಫಟಿಕವೂ ನೆನಪಿಗೆ ಬರುವುದಿಲ್ಲ. ಮುತ್ತುಗಳನ್ನು ಸಂಪಾದಿಸುವುದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವುದು ಕಷ್ಟ!
ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.
ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯವಾದ ಆಭರಣ.
ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ, ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.
ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೆಯದು ನೀಲಮಣಿ ಮೂರನೆಯದು ಪಚ್ಚೆ. ನಾಲ್ಕನೆಯದು ಪದ್ಮರಾಗ,