TSK

TSK · ವಿಮೋಚನಕಾಂಡ 28:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.

¶ ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು

¶ ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ, “ನಾವು ತಿರುಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ?” ಎಂದು ಕೇಳಲು, ಆತನು, “ಹೋಗಿ ಯುದ್ಧಮಾಡಿರಿ” ಅಂದನು.

ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆ ಎಂಬುದನ್ನು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದನು.

ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದು ಹೇಳಲು ಅವನು ತಂದನು.

ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ಆಜ್ಞಾಪಿಸಿದನು.

¶ ಕೊರಿಂಥದವರೇ, ಬಿಚ್ಚುಮನದಿಂದಲೂ ತೆರೆದ ಹೃದಯದಿಂದಲೂ ನಾವು ನಿಮ್ಮೊಡನೆ ಮಾತನಾಡಿದ್ದೇವೆ.

ನಾನಂತೂ ನನಗಿರುವುದನ್ನು ನಿಮ್ಮ ಆತ್ಮ ಸಂರಕ್ಷಣೆಗೋಸ್ಕರ ಅತಿ ಸಂತೋಷದಿಂದ ವೆಚ್ಚ ಮಾಡುತ್ತೇನೆ; ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತಿರೋ?

ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.

ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.