TSK

TSK · ವಿಮೋಚನಕಾಂಡ 28:38

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.

“ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?

ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.

ನೀವು ದೇವರಿಗೆ ಅಂಗೀಕಾರವಾಗುವಂತೆ ಯಾಜಕನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿ ಸಮರ್ಪಿಸುವನು. ಸಬ್ಬತ್ ದಿನದ ಮರು ದಿನದಲ್ಲಿಯೇ ಅದನ್ನು ನಿವಾಳಿಸಬೇಕು.

ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.

ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.

¶ “ಇದಲ್ಲದೆ, ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿಕೋ. ಇಸ್ರಾಯೇಲ್ ವಂಶದವರ ಪಾಪದ ಭಾರವನ್ನು ಅದರ ಮೇಲಿಡಬೇಕು. ನೀನು ಎಡಮಗ್ಗುಲಲ್ಲಿ ಮಲಗುವ ದಿನಗಳ ಪ್ರಕಾರ ಅವರ ಪಾಪದ ಭಾರವನ್ನು ಹೊತ್ತುಕೊಂಡಿರಬೇಕು.

ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.

ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.

ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.