ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.
TSK
TSK · ವಿಮೋಚನಕಾಂಡ 28:43
Treasury of Scripture Knowledge references in ಕನ್ನಡ IRV.
ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.
¶ “ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ, ಅದು ಅವನಿಗೆ ತಿಳಿಯದೆ ಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.
ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.
ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯದ ಪದಾರ್ಥಗಳನ್ನು ಯಾಜಕರು ಸಾಧಾರಣವೆಂದು ಎಣಿಸಬಾರದು.
ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು.
ಇನ್ನು ಮುಂದೆ ಇಸ್ರಾಯೇಲರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಬಾರದು, ಬಂದರೆ ಅವರು ಆ ದೋಷದಿಂದ ಸತ್ತುಹೋಗುವರು.
‹ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.›