TSK

TSK · ವಿಮೋಚನಕಾಂಡ 29:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.

ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.

ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ, ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಬೇಕು. ಹೀಗೆ ಅವನೂ ಮತ್ತು ಅವನ ಮಕ್ಕಳೂ ಅವರ ವಸ್ತ್ರಗಳ ಸಹಿತವಾಗಿ ಪರಿಶುದ್ಧರಾಗುವರು.

“ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.

ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು.

“ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,

ಅವನು ಆರೋನನಿಗೆ, “ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನು ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.

ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಲ್ಲಿ ಬರಬೇಕು. ಅವನು ದೋಷಪರಿಹಾರಕ ಯಜ್ಞಕ್ಕಾಗಿ ಹೋರಿಯನ್ನು ಮತ್ತು ಸರ್ವಾಂಗಹೋಮಕ್ಕಾಗಿ ಟಗರನ್ನು ತರಬೇಕು.

ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ, ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ.

ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.

¶ ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.