ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.
TSK
TSK · ವಿಮೋಚನಕಾಂಡ 29:13
Treasury of Scripture Knowledge references in ಕನ್ನಡ IRV.
ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಯೆಹೋವನಿಗಾಗಿ ಸುಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ.
ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುರಿದು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು.
ಆ ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನು, ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
ಆ ದೋಷಪರಿಹಾರಕ ಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಕೊಬ್ಬನ್ನು,
ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
ಯಜ್ಞವೇದಿಯ ಮೇಲಣ ಬೆಂಕಿ ಸರ್ವಾಂಗಹೋಮದ್ರವ್ಯದಿಂದ ಉರಿಯುತ್ತಲೇ ಇರಬೇಕು; ಅದು ಆರಿಹೋಗಬಾರದು. ಪ್ರತಿದಿನವೂ ಹೊತ್ತಾರೆಯಲ್ಲಿ ಯಾಜಕನು ಕಟ್ಟಿಗೆಯನ್ನು ತಂದುಹಾಕಿ, ಬೆಂಕಿ ಉರಿಸಿ, ಅದರ ಮೇಲೆ ಹೋಮದ್ರವ್ಯವನ್ನು ಕ್ರಮಪಡಿಸಿ, ಸಮಾಧಾನಯಜ್ಞಪಶುಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.
ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು; ಎದೆಯ ಭಾಗವು ಆರೋನನಿಗೂ ಮತ್ತು ಅವನ ವಂಶದವರಿಗೂ ಸೇರಬೇಕು.
ಅವನು ಆ ಟಗರಿನ ಕೊಬ್ಬನ್ನು ಅಂದರೆ ಬಾಲದ ಕೊಬ್ಬು, ಕರುಳುಗಳ ಮೇಲಣ ಎಲ್ಲಾ ಕೊಬ್ಬು, ಕಳಿಜದ ಹತ್ತಿರವಿರುವ ಕೊಬ್ಬು, ಎರಡು ಮೂತ್ರಪಿಂಡಗಳು, ಅವುಗಳ ಮೇಲಿದ್ದ ಕೊಬ್ಬನ್ನು ಮತ್ತು ಬಲತೊಡೆಯನ್ನು,
ಅವರು ಹೋರಿಯ ಕೊಬ್ಬನ್ನು, ಟಗರಿನ ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು,
ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಯಜ್ಞವೇದಿಗೆ ಎರಚಿ, ಅವುಗಳ ಕೊಬ್ಬನ್ನು ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.
ಅರ್ಪಿಸುವವನು, ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದರೆ ಅವನು, “ಈಗಲೇ ಕೊಡಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು” ಎನ್ನುವನು.
ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
ನೀನು ನನಗೋಸ್ಕರ ಹಣಕೊಟ್ಟು ತೈಲವನ್ನು ತರಲಿಲ್ಲ, ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.