ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠೆ ಮಾಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.
TSK
TSK · ವಿಮೋಚನಕಾಂಡ 29:28
Treasury of Scripture Knowledge references in ಕನ್ನಡ IRV.
¶ “‘ಜನರು ಯೆಹೋವನಿಗೆ ಅರ್ಪಿಸುವ ಸಮಾಧಾನಯಜ್ಞದ ನಿಯಮಗಳು ಇವೇ.
ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗೆಲ್ಲಾ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನು ನೈವೇದ್ಯವಾಗಿ ನಿವಾಳಿಸಬೇಕಾದ ಆ ಎದೆಯ ಭಾಗವನ್ನು ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ಮತ್ತು ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ” ಎಂದು ಹೇಳಿದನು.
ಪ್ರತಿ ಮನುಷ್ಯನು ಯೆಹೋವನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದು ಒಪ್ಪಿಸುತ್ತಾನೋ ಅದು ಆ ಯಾಜಕನದ್ದಾಗಿರುತ್ತದೆ.”
ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
¶ ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, “ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು.
ನಿಮಗೆ ಕೊಡಲ್ಪಡುವ ಸಕಲ ಪದಾರ್ಥಗಳಲ್ಲಿಯೂ ನೀವು ಉತ್ತಮ ಭಾಗವನ್ನೇ ದೇವರ ವಸ್ತುವಾಗುವುದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು’
ಅವರ ಅರ್ಧಪಾಲಿನಿಂದ ಅದನ್ನು ತೆಗೆದುಕೊಂಡು ಯೆಹೋವನಿಗೆ ಅರ್ಪಣೆಯಾಗಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು.
¶ ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು.