ಓಮೆರ್ ಎಂಬುದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಒಂದು ಅಳತೆಯ ಮಾಪನವಾಗಿದೆ.
TSK
TSK · ವಿಮೋಚನಕಾಂಡ 29:40
Treasury of Scripture Knowledge references in ಕನ್ನಡ IRV.
ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು.
ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”
ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.
ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.
ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
ನಿತ್ಯ ಸರ್ವಾಂಗಹೋಮವು ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ಸರ್ವಾಂಗಹೋಮವು, ಅದರ ಪಾನದ್ರವ್ಯದ ಅರ್ಪಣೆಯೂ ಆಗಬೇಕು.
ಆ ಏಳು ದಿನಗಳಲ್ಲಿಯೂ ನಿತ್ಯ ಸರ್ವಾಂಗಹೋಮವನ್ನು ಸಮರ್ಪಿಸುವುದಲ್ಲದೆ ಮೇಲೆ ಹೇಳಿದ ಕ್ರಮದ ಪ್ರಕಾರ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು, ಪಾನದ್ರವ್ಯವನ್ನು ಸಹ ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು.
ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಮತ್ತು ಅವರು ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ.
ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಎರಡು ಬಟ್ಟಲಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು.
ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.
ಟಗರಿನೊಡನೆ ಮೂವತ್ತು ಸೇರು ಗೋದಿಹಿಟ್ಟನ್ನೂ, ಕುರಿಗಳೊಡನೆ ಕೈಯಲಾದಷ್ಟು ಗೋದಿಹಿಟ್ಟನ್ನೂ, ಮೂವತ್ತು ಸೇರು ಗೋದಿಹಿಟ್ಟಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.
ಅರಸನು ಉತ್ಸವಗಳಲ್ಲಿಯೂ, ಹಬ್ಬಗಳಲ್ಲಿಯೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ, ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.
ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.
ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.