ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.
TSK
TSK · ವಿಮೋಚನಕಾಂಡ 29:43
Treasury of Scripture Knowledge references in ಕನ್ನಡ IRV.
ಆಗ ಮೋಶೆ ಅವರಿಗೆ, “ನೀವು ಏನು ಮಾಡಬೇಕೆಂದು ಯೆಹೋವನು ಆಜ್ಞಾಪಿಸಿದ್ದು ಇದೇ; ಅದರಂತೆ ನಡೆದರೆ ಯೆಹೋವನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು.
ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.
¶ ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು.
ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.
ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.
ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.