TSK

TSK · ವಿಮೋಚನಕಾಂಡ 3:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳಿದುಕೊಳ್ಳುವುದು ಹೇಗೆ?” ಎಂದು ಕೇಳಿದನು.

¶ ಮತ್ತು ಯೆಹೋವನು ಯಾಕೋಬನಿಗೆ, “ನೀನು ನಿನ್ನ ತಂದೆಯ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನೊಂದಿಗೆ ಇರುವೆನು” ಎಂದು ಹೇಳಿದನು.

ಹಾಗಾದರೆ ಈಗಲೇ ನೀನು ಹೊರಡು, ನಾನು ನಿನ್ನಗೆ ಮಾತನಾಡಲು ಬೇಕಾದ ಸಾಮರ್ಥ್ಯವನ್ನು ಕೊಡುತ್ತಾ, ನೀನು ಮಾತನಾಡಬೇಕಾದದ್ದನ್ನು ನಿನಗೆ ಬೋಧಿಸುವೆನು” ಎಂದು ಹೇಳಿದನು.

ನಾವು ಅರಣ್ಯದಲ್ಲಿ ಮೂರು ದಿನಗಳ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನು ಆಜ್ಞಾಪಿಸುವ ಪ್ರಕಾರ ಯಜ್ಞಮಾಡಬೇಕು” ಎಂದನು.

¶ ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು,

¶ ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.

ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಅಂದನು.

ಅವನು ಆತನಿಗೆ, “ಕರ್ತನೇ, ದಯವಿರಲಿ; ನನ್ನೊಂದಿಗೆ ಮಾತನಾಡುತ್ತಿರುವವರು ತಾವೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.

¶ ಮತ್ತು ಗಿದ್ಯೋನನು ದೇವರಿಗೆ, “ನೀನು ಹೇಳಿದಂತೆ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೋ ಇಲ್ಲವೋ ಎಂಬುದನ್ನು ತಿಳಿಯಪಡಿಸು.

ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು, ಒಂದು ಡೇರೆಗೆ ತಗಲಿ, ಅದನ್ನು ಬುಡಮೇಲು ಮಾಡಿ ಬೀಳಿಸಿಬಿಟ್ಟಿತು” ಎಂದು ಹೇಳಿದನು

ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.

ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.

ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.

ಆತನು, “ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿ ಬಿಟ್ಟು ಅವರಿಗೆ ಹೀಗೆ ಹೇಳು,

‹ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು›‹ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ”› ಎಂದು ಹೇಳಿದನು.

ಮತ್ತು ‘ನಿನ್ನ ಸಂತಾನದವರು ದಾಸರಾಗಿ ಸೇವೆಸಲ್ಲಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆ ಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು’ ಎಂಬುದೇ.

¶ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?