TSK

TSK · ವಿಮೋಚನಕಾಂಡ 3:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.

¶ ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.

ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.

¶ ಅದಕ್ಕೆ ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲ ಎಂದು ಹೇಳಬಹುದು?” ಎಂದನು.

¶ ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ, ಛತ್ರದಲ್ಲಿದ್ದಾಗ ಯೆಹೋವನು ಅವನೆದುರಿಗೆ ಬಂದು ಅವನ ಪ್ರಾಣವನ್ನು ತೆಗೆಯಬೇಕೆಂದಿದ್ದನು.

¶ ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು.

‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ, ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದ್ದಾನಷ್ಟೇ. ಈ ವರೆಗೂ ನೀನು ಅದನ್ನು ಲಕ್ಷ್ಯಕ್ಕೆ ತರಲಿಲ್ಲ.

¶ ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, “ನೀವು ಹೋಗಿ ಈ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ” ಎಂದನು.

¶ ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು, ಫರೋಹನ ಬಳಿಗೆ ಹೋಗಿ ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬುದಾಗಿ ಹೇಳಿದ್ದಾನೆ.

¶ ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.

¶ ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ” ಎಂದು ಹೇಳಿದನು.

ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.

ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು.

ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.

ಬಿಳಾಮನು ಬಾಲಾಕನಿಗೆ, “ನೀನು ಇಲ್ಲೇ ಸರ್ವಾಂಗಹೋಮ ಮಾಡಿರುವ ಸ್ಥಳದಲ್ಲಿ ನಿಂತುಕೋ. ನಾನು ಆ ಕಡೆಗೆ ಹೋಗಿ ಯೆಹೋವನನ್ನು ಎದುರುಗೊಳ್ಳುವೆನು” ಎಂದು ಹೇಳಿದನು.

ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.

ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ; ನಮ್ಮ ಮೇಲಾದರೋ ರೋಷಗೊಂಡಿದ್ದಿ; ಆದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ?

‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.