¶ ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.
TSK
TSK · ವಿಮೋಚನಕಾಂಡ 3:6
Treasury of Scripture Knowledge references in ಕನ್ನಡ IRV.
¶ ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,
ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.
ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು.
¶ ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,
¶ ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.
ನಾನು ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು.
ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.
ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.
ಐಗುಪ್ತ ದೇಶದಲ್ಲಿ ನಮ್ಮ ಪೂರ್ವಿಕರಿಗಿದ್ದ ಕಷ್ಟವನ್ನು ನೋಡಿ, ಕೆಂಪುಸಮುದ್ರದ ಬಳಿಯಲ್ಲಿ ಅವರು ಮೊರೆಯಿಟ್ಟಾಗ ನೀನು ಆಲಿಸಿದಿ.
ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು, ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು.
ಯಾಕೋಬನ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ,
ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.
ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.
ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು.
ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
‹ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ›‹‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’›
‹ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ›‹ಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.›
ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ’ ಎಂದು ಹೇಳಿದನು.
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, ‹“ಹೆದರಬೇಡ,›‹ನಾನು ಮೊದಲನೆಯವನೂ, ಕಡೆಯವನೂ,›