ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.
TSK
TSK · ವಿಮೋಚನಕಾಂಡ 3:8
Treasury of Scripture Knowledge references in ಕನ್ನಡ IRV.
ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.
ಅಮೋರಿಯರೂ, ಕಾನಾನ್ಯರೂ, ಗಿರ್ಗಾಷಿಯರೂ, ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ವಾಗ್ದಾನ ಮಾಡಿದನು.
¶ ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು.
ಅದೇ ದಿನದಲ್ಲಿ ಯೆಹೋವನು ಇಸ್ರಾಯೇಲರನ್ನು ಅವರವರ ಸೈನ್ಯಗಳ ಪ್ರಕಾರವಾಗಿ ಐಗುಪ್ತ ದೇಶದಿಂದ ಹೊರಗೆ ತಂದನು.
ನೀವು ಇಂಥವರನ್ನು ತೊಂದರೆಪಡಿಸಿದರೆ ಅವರು ನನಗೆ ಮೊರೆಯಿಡುವರು ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ.
ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ನೀನು ಹೋಗು. ಆದರೆ ನಾನು ನಿಮ್ಮ ಸಂಗಡ ಬರುವುದಿಲ್ಲ, ಏಕೆಂದರೆ ನೀವು ಮೊಂಡುತನದ ಜನರು. ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸಿಬಿಟ್ಟೇನು” ಅಂದನು.
ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.
ಅವರ ದೇಶವು ಒಳ್ಳೆಯದೋ ಅಥವಾ ಕೆಟ್ಟದ್ದೋ? ಅವರ ಪಟ್ಟಣಗಳು ಪಾಳೆಯಗಳೋ ಅಥವಾ ಕೋಟೆಗಳೋ?
ಅವರು ಇಸ್ರಾಯೇಲರ ಸರ್ವಸಮೂಹದವರಿಗೆ ಹೀಗೆ ಹೇಳಿದರು, “ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು.
ಅವರು ಅಲ್ಲಿನ ಹಣ್ಣುಗಳಲ್ಲಿ ಕೆಲವನ್ನು ತಂದು ತೋರಿಸಿ, “ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಆ ದೇಶವು ಒಳ್ಳೆಯ ದೇಶ” ಎಂದು ನಮಗೆ ತಿಳಿಸಿದರು.
¶ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.
ದೇಶವನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ. ಯೆಹೋವನು ನಿಮ್ಮ ಪೂರ್ವಿಕರಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕುವಿರಿ. ಅದು ಹಾಲೂ ಮತ್ತು ಜೇನೂ ಹರಿಯುವ ದೇಶ.
ನಿಮ್ಮ ಪೂರ್ವಿಕರ ದೇವರಾದ ಯೆಹೋವನು ತಾನು ವಾಗ್ದಾನಮಾಡಿದಂತೆ ನಿಮಗೆ ಕೊಡುವ ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಆ ದೊಡ್ಡ ಕಲ್ಲುಗಳ ಮೇಲೆ ಬರೆಯಿಸಬೇಕು.
ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.
ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ “ಬಹುಶಃ ನೀವು ನಮ್ಮ ದೇಶದ ನಿವಾಸಿಗಳೇ ಆಗಿರಬಹುದು. ಹೀಗಿರುವುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಕೊಟ್ಟರು.
ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ, ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದರಿಂದ ನೀನು ನೀತಿಸ್ವರೂಪನು.
ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.
ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.
ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.”
ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.
ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.
‹ಪರಲೋಕದಿಂದ ಇಳಿದು ಬಂದವನೇ, ಅಂದರೆ,›‹ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.›