ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.
TSK
TSK · ವಿಮೋಚನಕಾಂಡ 30:16
Treasury of Scripture Knowledge references in ಕನ್ನಡ IRV.
ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.
ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, “ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?
ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು.