TSK

TSK · ವಿಮೋಚನಕಾಂಡ 30:34

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೀಪಕ್ಕೆ ಬೇಕಾದ ಎಣ್ಣೆಯೂ, ಅಭಿಷೇಕ ತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳೂ,

“ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ,

¶ “‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.

¶ “‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.

ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು.

ಇನ್ನು ಕೆಲವರು ದೇವಾಲಯದ ಎಲ್ಲಾ ವಸ್ತುಗಳ ಮೇಲ್ವಿಚಾರಕರೂ, ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು.

ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?