ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.
TSK
TSK · ವಿಮೋಚನಕಾಂಡ 32:11
Treasury of Scripture Knowledge references in ಕನ್ನಡ IRV.
ಆಗ ಮೋಶೆ ಯೆಹೋವನಿಗೆ, “ಈ ಜನರನ್ನು ನಡೆಸಿಕೊಂಡು ಹೋಗುವ ಹೊಣೆಯನ್ನು ನನ್ನ ಮೇಲೆ ಹೊರಿಸಿ ನೀನು ಏಕೆ ನಿನ್ನ ದಾಸನಿಗೆ ತೊಂದರೆಯನ್ನು ತಂದಿದ್ದೀ? ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ?
ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.
ನಮ್ಮ ತಂದೆಗೆ ಗಂಡು ಮಗನಿಲ್ಲದ ಕಾರಣದಿಂದ ಅವನ ಹೆಸರು ಕುಲದಿಂದ ತೆಗೆದು ಹಾಕುವುದು ನ್ಯಾಯವೋ? ತಂದೆಯ ಕುಲದವರೊಂದಿಗೆ ನಮಗೂ ಸ್ವತ್ತನ್ನು ಕೊಡಬೇಕು” ಎಂದು ಕೇಳಿಕೊಂಡರು.
ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.
ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.
ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?
ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.