TSK

TSK · ವಿಮೋಚನಕಾಂಡ 32:34

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.

ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.

¶ ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು.

ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.

ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, ಕ್ಷಮಿಸುವ ದೇವರಾಗಿದ್ದಿ.

ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.

ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ. ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ.

ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.

“ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅವರನ್ನು ಶಿಕ್ಷಿಸುವ ದಿನಗಳಲ್ಲಿ, ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು. ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲದ ಮೇಲೆ ಉರುಳುವವು.

ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?