TSK

TSK · ವಿಮೋಚನಕಾಂಡ 32:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.

ಮತ್ತು ನೀನು ಎರಡು ಗೋಮೇಧಕ ಅಮೂಲ್ಯರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಬೇಕು.

¶ ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.

ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು, ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟು ಹೋದದ್ದು ನನಗೆ ಕಂಡುಬಂತು.

ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಆದ್ದರಿಂದ ಇಸ್ರಾಯೇಲರೆಲ್ಲರೂ ಅದನ್ನು ಪೂಜಿಸುತ್ತಿದ್ದುದರಿಂದ ದೈವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.

ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.

ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.

ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?

ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?

ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.

ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ಭಯಪಡುವರು. ಅದರ ಭಕ್ತ ಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ನಂದಿಹೋಯಿತು ಎಂದು ಪೂಜಾರಿಗಳು ಅದಕ್ಕಾಗಿ ನಡುಗುವರು.

ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನು ಅರ್ಪಿಸಿ ತಮ್ಮ ಕೈಗಳಿಂದ ನಿರ್ಮಿಸಿದ ವಸ್ತುವಿನಲ್ಲಿ ಉಲ್ಲಾಸ ಪಟ್ಟರು.

ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.