TSK

TSK · ವಿಮೋಚನಕಾಂಡ 33:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು.

ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು.

ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.

“ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.

ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ನಿಜವಾಗಿಯೂ ಹಾಲೂ ಮತ್ತು ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.

ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡುವೆನು. ಈ ಜನರಿಗಿಂತ ನಿನ್ನನ್ನು ದೊಡ್ಡದಾಗಿಯೂ, ಬಲಿಷ್ಠವಾಗಿಯೂ ಇರುವ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.

“ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು.

ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.

ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.

ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.

ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.

ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕಿತ್ತು, ಕೆಡವಿ ನಾಶಪಡಿಸಬೇಕೆಂದು ಅಪ್ಪಣೆಕೊಟ್ಟಾಗ,

ನಾನು ನೀತಿವಂತನಿಗೆ, ‘ನೀನು ಖಂಡಿತವಾಗಿ ಬದುಕುವಿ’ ಎಂದು ಹೇಳುವಾಗ, ಅವನು ತನ್ನ ನೀತಿಯ ಮೇಲೆ ಭರವಸವಿಟ್ಟು ಪಾಪ ಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.

ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು.

¶ “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.