ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ” ಎಂದರು.
TSK
TSK · ವಿಮೋಚನಕಾಂಡ 35:22
Treasury of Scripture Knowledge references in ಕನ್ನಡ IRV.
ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ, ಇಸ್ರಾಯೇಲರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದು ಕೊಡಬೇಕು ಎಂಬುದಾಗಿ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಿಸಿದನು.
¶ ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕಾರ್ಯಗಳಿಗಾಗಿ ಧನ ಸಹಾಯ ಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು ಸಾವಿರ ಬಂಗಾರದ ನಾಣ್ಯಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.
ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.
ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು, ಕಂಠಕ್ಕೆ ಮಾಲೆಯನ್ನು,
¶ ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.