“ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.
TSK
TSK · ವಿಮೋಚನಕಾಂಡ 36:2
Treasury of Scripture Knowledge references in ಕನ್ನಡ IRV.
ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.
ಆರು ದಿನಗಳು ನೀವು ಕೆಲಸ ಮಾಡಬೇಕು; ಏಳನೆಯ ದಿನವು ಪರಿಶುದ್ಧವಾದ ದಿನ; ಅದು ಯೆಹೋವನಿಗೆ ಮೀಸಲಾದ ಸಬ್ಬತ್ ದಿನವಾಗಿರುವುದರಿಂದ ಅಂದು ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಿಬಿಡಬೇಕು; ಆ ದಿನದಲ್ಲಿ ಕೆಲಸಮಾಡುವವನಿಗೆ ಮರಣದಂಡನೆಯಾಗಬೇಕು;
ಯಾರನ್ನು ಹೃದಯವು ಪ್ರೇರೇಪಿಸಿತೋ, ಯಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕಾಗಿಯೂ ಅದರ ಸಮಸ್ತ ಸೇವೆಗಳಿಗಾಗಿಯೂ, ಪವಿತ್ರ ವಸ್ತ್ರಗಳಿಗಾಗಿಯೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.
ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿ ಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ಹೊತ್ತು ಉದಾರಹಸ್ತದಿಂದ ಯೆಹೋವನಿಗೋಸ್ಕರ ಕಾಣಿಕೆಯನ್ನರ್ಪಿಸುವುದಕ್ಕೆ ಯಾರಿಗೆ ಮನಸ್ಸಿದೆಯೋ ಅವರು ಮುಂದೆ ಬರಲಿ” ಎಂದು ನೆರೆದ ಸಭೆಗೆ ಹೇಳಿದನು.
ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.
ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.