ಇದಲ್ಲದೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಹೋಗಬೇಕು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ” ಅಂದನು.
TSK
TSK · ವಿಮೋಚನಕಾಂಡ 4:14
Treasury of Scripture Knowledge references in ಕನ್ನಡ IRV.
ಅವರು, “ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತನಾಡುತ್ತಾನೋ? ನಮ್ಮ ಮೂಲಕ ಆತನು ಮಾತನಾಡುವುದಿಲ್ಲವೇ?” ಎಂದು ಹೇಳಿಕೊಂಡರು. ಅವರು ಆಡಿದ ಮಾತು ಯೆಹೋವನಿಗೆ ಕೇಳಿಸಿತು.
ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು, ಈ ತಪ್ಪಿಗೆ ಅವನನ್ನು ಸಂಹರಿಸಿದನು. ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.
¶ ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದ್ದರಿಂದ ಆತನು ಇಸ್ರಾಯೇಲರನ್ನು ಬಾಧಿಸಿದನು.
¶ ಯೇಸು ಮತ್ತೊಬ್ಬನಿಗೆ, ‹“ನನ್ನನ್ನು ಹಿಂಬಾಲಿಸು”› ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು.
ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು.
ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವುದಿಲ್ಲ.