ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.
TSK
TSK · ವಿಮೋಚನಕಾಂಡ 4:21
Treasury of Scripture Knowledge references in ಕನ್ನಡ IRV.
ಆದಕಾರಣ ನಾನು ನನ್ನ ಕೈಯನ್ನು ಚಾಚಿ ಐಗುಪ್ತ ದೇಶದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು. ಅನಂತರ ಅರಸನು ನಿಮ್ಮನ್ನು ಕಳುಹಿಸಿಕೊಡುವನು.
ಯೆಹೋವನು ಮೊದಲು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.
ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು.
ಯೆಹೋವನು ಮೋಶೆಯಿಂದ ಹೇಳಿಸಿದಂತೆಯೇ ಆಯಿತು. ಫರೋಹನ ಹೃದಯವು ಕಠಿಣವಾಗಿತ್ತು. ಅವನು ಇಸ್ರಾಯೇಲರನ್ನು ಹೋಗಲು ಬಿಡಲಿಲ್ಲ.
ಮೋಶೆ ಮತ್ತು ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದರು. ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಫರೋಹನು ಇಸ್ರಾಯೇಲರಿಗೆ ತನ್ನ ದೇಶವನ್ನು ಬಿಟ್ಟು ಹೋಗುವುದಕ್ಕೆ ಅಪ್ಪಣೆ ಕೊಡದೆ ಹೋದನು.
ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.
ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.
ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ, ಅವರು ಆತನ ಜನರನ್ನು ದ್ವೇಷಿಸಿ, ಆತನ ಸೇವಕರನ್ನು ಕುಯುಕ್ತಿಯಿಂದ ನಡೆಸಿದರು.
ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು.
¶ ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.
“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.
ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.