ಪ್ರತಿದಿನವೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.
TSK
TSK · ವಿಮೋಚನಕಾಂಡ 40:10
Treasury of Scripture Knowledge references in ಕನ್ನಡ IRV.
ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿಮುಕಿಸಿ, ಯಜ್ಞವೇದಿಯನ್ನು ಅದರ ಎಲ್ಲಾ ಉಪಕರಣಗಳನ್ನು, ಬೋಗುಣಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.
ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.
¶ ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.