TSK

TSK · ವಿಮೋಚನಕಾಂಡ 6:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.

ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,

¶ ಐಗುಪ್ತರ ಅರಸನು ಅವರಿಗೆ, “ಮೋಶೆ ಮತ್ತು ಆರೋನರೇ, ಈ ಜನರು ತಮ್ಮ ಕೆಲಸವನ್ನು ಮಾಡದಂತೆ ಯಾಕೆ ಅಡ್ಡಿ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಕ್ಕೆ ಹೋಗಿರಿ” ಎಂದು ಹೇಳಿದನು.

ಆದುದರಿಂದ ಯೆಹೋವನು ಹೇಳುವುದೇನೆಂದರೆ, ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವುದಕ್ಕಾಗಿ ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಸುವೆನು. ಆಗ ಅದು ರಕ್ತವಾಗುವುದು.

ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.

ನಾನು ಫರೋಹನನಲ್ಲಿಯೂ ಅವನ ರಥಗಳಲ್ಲಿಯೂ, ಕುದುರೆಗಳಲ್ಲಿಯೂ ಪ್ರಖ್ಯಾತಿ ಹೊಂದಿದ ನಂತರ ನಾನೇ ಯೆಹೋವನು ಎಂಬುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಎಂದನು.

ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು. ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು ದಾಟಿ ಹೋಗಿ ದೇಶವನ್ನು ಸೇರುವರು.

ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.

ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ ನಾನೇ ಅವರ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು. ಅವರ ದೇವರಾದ ಯೆಹೋವನು ನಾನೇ.

ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.

ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.

ನಲ್ವತ್ತು ವರ್ಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪು ಹರಿಯಲ್ಲಿಲ್ಲ ಅಥವಾ ಕಾಲಿನಲ್ಲಿದ್ದ ಕೆರವಾಗಲಿ ಸವೆದು ಹೋಗಲಿಲ್ಲ;

ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ವಾಗ್ದಾನ ಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ, ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುತ್ತಾನೆ.

ಇಸ್ರಾಯೇಲರು ಸದಾಕಾಲವೂ ನಿನ್ನ ಪ್ರಜೆಯಾಗಿರಬೇಕೆಂದು ನಿರ್ಣಯಿಸಿದ ಯೆಹೋವನೇ, ನೀನು ಅವರಿಗೆ ದೇವರಾದಿ.

ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು.

“ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.

ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲಸ್ವಾಮಿಯೇ ಸೃಷ್ಟಿಸಿದ್ದಾನೆ” ಎಂದು ಎಲ್ಲರೂ ಕಂಡು ತಿಳಿದು ಮನಸ್ಸಿಗೆ ತಂದು ಗ್ರಹಿಸಿಕೊಳ್ಳುವರು.

ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.

ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.

“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”

¶ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?

ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.

ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.