ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ.
TSK
TSK · ವಿಮೋಚನಕಾಂಡ 7:16
Treasury of Scripture Knowledge references in ಕನ್ನಡ IRV.
¶ ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು.
¶ ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೀಗೆಂದು ಹೇಳು, ‘ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.
¶ ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.
ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು.
ಫಿಲಿಷ್ಟಿಯರು ಇದನ್ನು ಕೇಳಿ, “ಇಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೇನು ಕಾರಣ” ಎಂದು ವಿಚಾರಿಸುವಲ್ಲಿ ಯೆಹೋವನ ಮಂಜೂಷವು ಪಾಳೆಯದಲ್ಲಿ ಬಂದದ್ದೇ ಕಾರಣವೆಂದು ತಿಳಿದುಕೊಂಡರು.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮತ್ತು ಯೆಹೂದ್ಯರು ಉಭಯರೂ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.