¶ ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.
TSK
TSK · ವಿಮೋಚನಕಾಂಡ 8:32
Treasury of Scripture Knowledge references in ಕನ್ನಡ IRV.
¶ ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ, ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು, ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು” ಎಂದನು.
ಫರೋಹನು ವಿಚಾರಿಸಿದಾಗ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂಬುದನ್ನು ತಿಳಿದುಕೊಂಡನು. ಆದರೂ ಫರೋಹನ ಹೃದಯವು ಕಠಿಣವಾಗಿದ್ದರಿಂದ ಆ ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲಿಲ್ಲ.
ನಿಮ್ಮ ಪೂರ್ವಿಕರಿಗೆ ವಿವರವಾಗಿ ಹೇಳಿದ್ದೇನೆಂದರೆ; “‘ನೀನು ಈ ಜನರ ಬಳಿಗೆ ಹೋಗಿ ಅವರಿಗೆ; ನೀವು ಕಿವಿಯಿದ್ದು ಕೇಳಿಕೊಂಡರೂ ತಿಳಿದುಕೊಳ್ಳುವುದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವುದೇ ಇಲ್ಲ, ಎಂಬುದಾಗಿ ಹೇಳು.
ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.