TSK

TSK · ವಿಮೋಚನಕಾಂಡ 9:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಮೋಶೆಗೆ, “ಆಕಾಶಕ್ಕೆ ನಿನ್ನ ಕೈಚಾಚು, ಆಗ ಐಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಹೊಲದಲ್ಲಿರುವ ಎಲ್ಲಾ ಪೈರುಗಳ ಮೇಲೆಯೂ ಆನೆಕಲ್ಲಿನ ಮಳೆ ಬೀಳುವುದು” ಎಂದು ಹೇಳಿದನು.

ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದಿಳಿದು ಐಗುಪ್ತ ದೇಶದ ಎಲ್ಲಾ ಕಡೆಯಲ್ಲಿಯೂ ಅಪರಿಮಿತವಾಗಿ ಮುತ್ತಿಕೊಂಡವು. ಅಂಥ ಮಿಡತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರಲು ಸಾಧ್ಯವಿಲ್ಲ.

ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.

¶ ಆಗ ಎಲೀಷನು ಅವನಿಗೆ, “ಯೆಹೋವನ ವಾಕ್ಯವನ್ನು ಕೇಳು, ಆತನು, ‘ನಾಳೆ ಈ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು’” ಎನ್ನುತ್ತಾನೆ ಎಂದು ಹೇಳಿದನು.

ಹಿಮದ ಭಂಡಾರಗಳನ್ನು ಪ್ರವೇಶಿಸಿದ್ದೀಯಾ? ಕಲ್ಮಳೆಯ ಬೊಕ್ಕಸಗಳನ್ನು ನೋಡಿದ್ದೀಯಾ?