TSK

TSK · ವಿಮೋಚನಕಾಂಡ 9:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಕೆಯು ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಸ್ತ್ರೀಯರು, “ಭಯಪಡಬೇಡ, ಮಗನನ್ನು ಹಡೆದಿರುವೆ” ಎಂದು ಹೇಳಿದರು. ಆಕೆಯು ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ, ಪ್ರತ್ಯುತ್ತರಕೊಡಲಿಲ್ಲ.

ಮಾನವನು ಎಷ್ಟರವನು, ಅವನನ್ನು ನೀನು ಏಕೆ ಲಕ್ಷಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು?

ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.

ಆ ಪುರುಷನು ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ. ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ಇಲ್ಲಿಗೆ ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು” ಎಂದು ಹೇಳಿದನು.