TSK

TSK · ಯೆಹೆಜ್ಕೇಲನು 13:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ವಿವೇಕಿಯ ಹೃದಯ ತಿಳಿವಳಿಕೆಯನ್ನು ಹುಡುಕುವುದು, ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವುದು.

ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.

ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಆಸ್ಪದವಾದವು.

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಗಳನ್ನು ಕಟ್ಟಿ, ಉದ್ದವಾದವರಿಗೂ, ಗಿಡ್ಡವಾದವರಿಗೂ ತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?

ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.

¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.›

¶ ‹“ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.›

ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ!

ಆದರೆ ಅವರು ಹೆಚ್ಚು ಮುಂದುವರಿಯಲು ಸಾಧ್ಯವಿಲ್ಲ. ಆ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪ್ರಕಟವಾಗಿ ಬಂದ ಹಾಗೆಯೇ ಇವರದೂ ಪ್ರಕಟವಾಗುವುದು.