TSK

TSK · ಯೆಹೆಜ್ಕೇಲನು 21:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.

ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ, ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.

‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು.

ಇನ್ನು ಮೇಲೆ ಇಸ್ರಾಯೇಲ್ ವಂಶದವರಲ್ಲಿ ಯಾರಿಗೂ ಸುಳ್ಳು ದರ್ಶನವಾಗದು, ಮೋಸದ ಕಣಿಯೂ ಇರದು.

¶ “ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ;

ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತಿರವಾಗಿದೆ; ಇದೇ ನಿನ್ನ ಅಪರಾಧದ ಕಡೆಗಾಲ.”

¶ “‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಯ ಕಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದೆ.