ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.
TSK
TSK · ಯೆಹೆಜ್ಕೇಲನು 39:29
Treasury of Scripture Knowledge references in ಕನ್ನಡ IRV.
ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು” ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.
¶ ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.
ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.
ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.
ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿ ಇರುವವನು, ನಾನೇ ನಿಮ್ಮ ದೇವರಾದ ಯೆಹೋವನು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.
ಇಗೋ ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ, ನಾನು ಯೆಹೂದದ ಮತ್ತು ಯೆರೂಸಲೇಮಿನ ಸಂಪತ್ತನ್ನು ಪುನಃಸ್ಥಾಪಿಸುವಾಗ,
¶ ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.
ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.