TSK

TSK · ಎಜ್ರನು 1:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಬೆಳ್ಳಿಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಯೆರೂಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು.

ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.

ಆಗ ಆ ಶೆಷ್ಬಚ್ಚರನು ಬಂದು ಯೆರೂಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿಸಿದನು. ಅಂದಿನಿಂದ ಇಂದಿನ ವರೆಗೂ ಕಟ್ಟುವ ಕೆಲಸವು ನಡೆಯುತ್ತಿರುತ್ತದೆ. ಇನ್ನೂ ಮುಗಿದಿರುವುದಿಲ್ಲ’ ಎಂಬುದಾಗಿ ಉತ್ತರಕೊಟ್ಟರು.

¶ ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು,

¶ ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.