ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.
TSK
TSK · ಎಜ್ರನು 10:3
Treasury of Scripture Knowledge references in ಕನ್ನಡ IRV.
ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಾಯೇಲ್ಯರಿಗೂ “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಬೇಕು” ಎಂದು ಕೇಳಿ ಕೊಂಡರು.
¶ ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ, ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಅಲ್ಲಿ ಪ್ರಮಾಣ ಮಾಡಿದರು. ಇದಲ್ಲದೆ ರಾಜಪ್ರಜೆಗಳೂ ಒಡಂಬಡಿಕೆಮಾಡಿಕೊಂಡರು.
ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.
“ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.
ಆಮೇಲೆ ಎಲ್ಲಾ ಯೆರೂಸಲೇಮಿನವರಿಂದಲೂ, ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇಮಿನವರು ಏಕದೇವರಾದ ತಮ್ಮ ಪೂರ್ವಿಕರ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು.
ಇವರೆಲ್ಲರೂ ಅನ್ಯಕುಲದ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳು ಹುಟ್ಟಿದ್ದರು.
¶ ಈ ಎಲ್ಲಾ ಕಾರಣಗಳನ್ನು ನಾವು ನೆನಪುಮಾಡಿಕೊಂಡು ಲೇಖನ ರೂಪವಾದ ಪ್ರತಿಜ್ಞೆಯನ್ನು ಸ್ಥಿರಮಾಡಿಕೊಂಡಿದ್ದೇವೆ. ಅದಕ್ಕೆ ನಮ್ಮ ಪ್ರಭುಗಳೂ, ಲೇವಿಯರೂ, ಯಾಜಕರೂ ಸಹಿಮಾಡಿ ಮುದ್ರೆ ಹಾಕಿರುವರು.
ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:
ನನ್ನ ನಡತೆಯನ್ನು ಶೋಧಿಸಿದೆನು, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.
ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.
ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.