ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.
TSK
TSK · ಎಜ್ರನು 2:1
Treasury of Scripture Knowledge references in ಕನ್ನಡ IRV.
ಆಗ ಅವರ ಪಟ್ಟಣಗಳನ್ನೂ, ಸ್ವಾಸ್ತ್ಯವನ್ನೂ ಮೊದಲು ಸ್ವಾಧೀನಮಾಡಿಕೊಂಡವರು ಇಸ್ರಾಯೇಲ್ಯರು, ಯಾಜಕರು ಲೇವಿಯರು ಮತ್ತು ದೇವಾಲಯದ ಸೇವಕರು ಇವರೇ.
ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
ನಾವು ಯೆಹೂದ ಸೀಮೆಗೆ ಹೋಗಿ ಮಹೋನ್ನತನಾದ ದೇವರ ಆಲಯವನ್ನು ನೋಡಿ ಬಂದೆವು ಎಂದು ತಮಗೆ ತಿಳಿಸಲು ಇಚ್ಛಿಸುತ್ತೇನೆ. ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ, ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ, ವಿಶೇಷ ಶ್ರಮದಿಂದ ವೇಗವಾಗಿ ನಡೆಯುತ್ತಿದೆ.
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಸೆರೆಯಾಗಿ ಒಯ್ಯಲ್ಪಟ್ಟವರು ಹಿಂತಿರುಗಿ ತಮ್ಮ ಸ್ವದೇಶವಾದ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ, ಯೆರೂಸಲೇಮಿಗೂ ಹಿಂತಿರುಗಿದರು.
¶ ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.
“ಪಾನಮಾಡುವುದರಲ್ಲಿ ಯಾರಿಗೂ ಒತ್ತಾಯಮಾಡಬಾರದು” ಎಂದು ರಾಜಾಜ್ಞೆಯಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದಂತೆ ಕೊಡಬೇಕೆಂದು ರಾಜನು ತನ್ನ ಎಲ್ಲಾ ಮನೆವಾರ್ತೆಯವರಿಗೆ ಆಜ್ಞಾಪಿಸಿದ್ದನು.
ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.
¶ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.
¶ ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.
ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ, ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಎಳೆಕೂಸುಗಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ.
ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.