ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ.
TSK
TSK · ಎಜ್ರನು 2:63
Treasury of Scripture Knowledge references in ಕನ್ನಡ IRV.
ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.
¶ “‘ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು.
“ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?
¶ “‘ಯಾಜಕನಲ್ಲದೆ ಇತರರು ನೈವೇದ್ಯದ ಪದಾರ್ಥವನ್ನು ಊಟಮಾಡಬಾರದು. ಯಾಜಕನ ಬಳಿಯಲ್ಲಿರುವ ಅತಿಥಿಯಾಗಲಿ ಅಥವಾ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.
ಯಾವನಾದರೂ ತಿಳಿಯದೆ ನೈವೇದ್ಯವಾದದ್ದನ್ನು ಊಟಮಾಡಿದರೆ ಅದನ್ನು ಮತ್ತು ಅದರ ಐದನೆಯ ಭಾಗವನ್ನು ಯಾಜಕನಿಗೆ ತಂದುಕೊಡಬೇಕು.
ಇಸ್ರಾಯೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ, ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಬೇಕು” ಎಂದು ಹೇಳಿದನು.
ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.
ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.
ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, “ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ” ಎಂದು ಹೇಳಿದರು.
ಸೆರಾಯ, ಅಜರ್ಯ, ಯೆರೆಮೀಯ,