ನೀವು ನಿಮ್ಮ ನಿಮ್ಮೊಳಗೆ ಯೆಹೋವನಿಗಾಗಿ ಕಾಣಿಕೆಯನ್ನು ತೆಗೆದುಕೊಡಬೇಕು; ಒಳ್ಳೆಯ ಮನಸ್ಸಿರುವವರೆಲ್ಲರೂ ಕಾಣಿಕೆಯನ್ನು ತಂದುಕೊಡಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕೆಂದರೆ; ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳು,
TSK
TSK · ಎಜ್ರನು 2:68
Treasury of Scripture Knowledge references in ಕನ್ನಡ IRV.
ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು.
ಅವರು ಆರು ಕಮಾನು ಬಂಡಿಯನ್ನೂ ಮತ್ತು ಹನ್ನೆರಡು ಎತ್ತುಗಳನ್ನೂ ಯೆಹೋವನ ಸನ್ನಿಧಿಗೆ ಕಾಣಿಕೆಯಾಗಿ ತಂದರು. ನಾಯಕರಾದ ಇಬ್ಬರಿಬ್ಬರೂ ಒಂದು ಕಮಾನು ಬಂಡಿಯನ್ನೂ, ಪ್ರತಿ ನಾಯಕನು ಒಂದು ಜೋಡಿ ಎತ್ತನ್ನೂ, ದೇವದರ್ಶನ ಗುಡಾರದ ಮುಂದೆ ತಂದರು. ಹೀಗೆ ಆರು ಜೊತೆ ಬಂಡಿ ಆರು ಜೊತೆ ಎತ್ತುಗಳನ್ನು ತಂದು ಅರ್ಪಿಸಿದರು.
¶ ಆಗ ದಾವೀದನು, “ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ” ಎಂದು ಹೇಳಿದನು.
¶ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ, ಯೆಹೋವನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ಆಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. ಇದು ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.
ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ, ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.
ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.
ಅವರು ತಮ್ಮ ಶಕ್ತಿಯನುಸಾರವಾಗಿ ಮಾತ್ರ ಕೊಡದೆ ಶಕ್ತಿಯನ್ನು ಮೀರಿ ತಮ್ಮಿಷ್ಟಕ್ಕೆ ತಾವೇ ಉದಾರವಾಗಿ ದಾನಮಾಡಿದರು.
ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.