¶ “ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.
TSK
TSK · ಎಜ್ರನು 3:1
Treasury of Scripture Knowledge references in ಕನ್ನಡ IRV.
“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.
¶ ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.
ಉಳಿದ ಜನರು ಕೊಟ್ಟದ್ದು ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಒಂದು ಲಕ್ಷ ತೊಲಾ ಬೆಳ್ಳಿ, ಅರುವತ್ತೇಳು ಯಾಜಕವಸ್ತ್ರಗಳನ್ನು ನೀಡಿದರು.
¶ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು.
¶ “ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.
¶ ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.