ಆರೋನನ ಮಕ್ಕಳಿಗೆ ತಕ್ಕ ಗೌರವಕ್ಕಾಗಿಯೂ, ಅಲಂಕಾರಕ್ಕಾಗಿಯೂ ಅವರಿಗೆ ಮೇಲಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸಬೇಕು.
TSK
TSK · ಎಜ್ರನು 3:10
Treasury of Scripture Knowledge references in ಕನ್ನಡ IRV.
ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು” ಎಂದು ಆಜ್ಞಾಪಿಸಲು, ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ಆ ದಿನ ಕೊಂದುಹಾಕಿದನು.
ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಎಂಬ ಯಾಜಕರು ತುತ್ತೂರಿಗಳನ್ನು ಊದುತ್ತಾ ದೇವ ಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್ ಮತ್ತು ಯೆಹೀಯ ಎಂಬುವವರು ಮಂಜೂಷದ ದ್ವಾರಪಾಲಕರಾಗಿದ್ದರು.
¶ ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.
ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.
¶ ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,
ಹದಿನೆಂಟನೆಯವನು ಹನಾನೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.
ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರವಾಗಿ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣವಿರಲಿಲ್ಲ.
ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು: