¶ ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.
TSK
TSK · ಎಜ್ರನು 4:12
Treasury of Scripture Knowledge references in ಕನ್ನಡ IRV.
ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ.
ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ತಮ್ಮ ಜೊತೆಗಾರರೊಂದಿಗೆ ಅವರ ಬಳಿಗೆ ಬಂದು.
ಅವರು ನನಗೆ, “ಸೆರೆಯವರೊಳಗಿಂದ ತಪ್ಪಿಸಿಕೊಂಡು ಬಂದು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇಮಿನ ಪೌಳಿಗೋಡೆಯು ಕೆಡವಲ್ಪಟ್ಟಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ” ಎಂದು ಹೇಳಿದರು.
ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.
ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.
ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.
“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.
ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.