ಅವನು ಅವುಗಳನ್ನು ಖಜಾನೆಯ ಅಧಿಕಾರಿಯಾದ ಮಿತ್ರದಾತನಿಗೆ ಒಪ್ಪಿಸಿದನು. ಇವನು ಅವುಗಳನ್ನು ಯೆಹೂದದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕಮಾಡಿ ಕೊಟ್ಟನು.
TSK
TSK · ಎಜ್ರನು 5:2
Treasury of Scripture Knowledge references in ಕನ್ನಡ IRV.
ಅವರು ಯೆರೂಸಲೇಮಿನ ದೇವಾಲಯವನ್ನು ತಲುಪಿದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ, ಲೇವಿಯರೂ, ಸೆರೆಯಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿ, ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯದಲ್ಲಿ ಕಟ್ಟುವವರ ಮೇಲ್ವಿಚಾರಣೆಗಾಗಿ ನೇಮಿಸಿದರು.
¶ ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.
ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.
¶ ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.
ಪುನಃ ನಾನು ಪ್ರಸ್ತಾಪವನ್ನೆತ್ತಿ ವಿವರಿಸುವ ದೇವದೂತನನ್ನು, “ಸ್ವಾಮೀ, ಇವು ಏನನ್ನು ಸೂಚಿಸುತ್ತದೆ?” ಎಂದು ಕೇಳಿದ್ದಕ್ಕೆ,
ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಆ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವ ಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ” ಎಂದು ಹೇಳಿದನು.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ!