TSK

TSK · ಎಜ್ರನು 7:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.

ಆದರೆ ಯೆಹೂದ್ಯರು ಮತ್ತು ಹಿರಿಯರೊಂದಿಗೆ ದೇವರ ಕೃಪಾಕಟಾಕ್ಷ ಇದ್ದುದರಿಂದ ವಿಚಾರಿಸುವುದಕ್ಕೆ ಬಂದವರು ಅವರಿಗೆ ಅಡ್ಡಿಮಾಡದೆ, ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ವರ್ತಮಾನ ಮುಟ್ಟಿಸಿ, ಉತ್ತರವನ್ನು ಬರೆದು ಕಳುಹಿಸುವೆವೆಂದು ಹೇಳಿ ಹೊರಟು ಹೋದರು.

ಅವನು ಮೊದಲನೆಯ ತಿಂಗಳಿನ ಮೊದಲ ದಿನದಲ್ಲಿ ಬಾಬಿಲೋನಿನಿಂದ ಹೊರಟನು; ತನ್ನ ದೇವರ ಕೃಪಾ ಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು.

ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯಮಾಡಿಕೂಂಡ ಮೇಲೆ ಸಾಧಾರಣ ಜನರೂ, ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂತು.

ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ, ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.

ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.

ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.